Daily story: ಹರಿತಲೇಖನಿ ದಿನಕ್ಕೊಂದು ಕಥೆ: ಶಿಕ್ಷೆ

Daily story: ಈ ಪ್ರಪಂಚದಲ್ಲಿ ಅನೇಕ ಜನರು ತಪ್ಪು ಮಾಡಿದಾಗ ಶಿಕ್ಷೆಗೆ ಒಳಗಾಗುವುದುಂಟು. ಶಿಕ್ಷೆಯ ಉದ್ದೇಶ-ಶಿಕ್ಷ ಣವೇ ಆಗಿದೆ. ಒಮ್ಮೆ ತಪ್ಪು ಮಾಡಿದವನು ಮುಂದಕ್ಕೆಂದೂ ಅಂತಹ ತಪ್ಪು ಮಾಡದಿರುವಂತಹ ಶಿಕ್ಷಣ ನೀಡುವುದಕ್ಕಾಗಿ ನಮ್ಮ ಆಡಳಿತ ವ್ಯವಸ್ಥೆಯಲ್ಲಿ

ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಗಳಿವೆ. ಇದರಿಂದ ನಮ್ಮ ಸಮಾಜವನ್ನು, ಜನಜೀವನವನ್ನು ಸರಿ ಮಾರ್ಗದಲ್ಲಿ ಮುನ್ನಡೆಸುವಂತಹ ಕೆಲಸ ಸಾಧ್ಯ. ಈ ಬಗೆಯ ನ್ಯಾಯಾಂಗ ಮಹತ್ವವನ್ನು ನಿರೂಪಿಸುವ ಒಂದು ಪ್ರಸಂಗ ಇಲ್ಲಿದೆ.

ಚೀನಾ ದೇಶದಲ್ಲಿ ಒಬ್ಬ ಚಿಂತಕರ ಪ್ರಸಿದ್ಧಿಯನ್ನು ಕೇಳಿ ಅಲ್ಲಿಯ ಅರಸನು ಅವರನ್ನು ತನ್ನ ರಾಜ್ಯದ ನ್ಯಾಯಾಧೀಶರನ್ನಾಗಿ ನೇಮಕ ಮಾಡಿದನು. ಈ ನ್ಯಾಯಾಧೀಶರು ಸೂಕ್ತ ನ್ಯಾಯ ತೀರ್ಪುಗಳಿಂದಾಗಿ ಬಹು ವಿಖ್ಯಾತರಾದರು.

ಅಲ್ಲಿಯ ರಾಜಧಾನಿಯಲ್ಲಿ ಒಬ್ಬ ಶ್ರೀಮಂತ ವ್ಯಾಪಾರಿಯ ಬಳಿ ಸಾಕಷ್ಟು ಸಂಪತ್ತು ಇತ್ತು. ಇದೆಲ್ಲವೂ ಬಡ ಜನರ ಶೋಷಣೆಯಿಂದ ಸಂಗ್ರಹಿಸಿದ್ದು, ಅದರ ರಕ್ಷ ಣೆಗಾಗಿ ಬಲಿಷ್ಠ ರಕ್ಷ ಕರನ್ನೂ ನೇಮಿಸಿಕೊಂಡಿದ್ದ. ಹಾಗಿದ್ದರೂ ಒಮ್ಮೆ ಕಳ್ಳತನ ನಡೆದೇ ಬಿಟ್ಟಿತು ಹಾಗೂ ಕಳ್ಳನನ್ನು ಬಂಧಿಸಲಾಯಿತು.

ಈ ಕಳ್ಳನನ್ನು ಸುಪ್ರಸಿದ್ಧ ನ್ಯಾಯಾಧೀಶರೆದುರು ಹಾಜರುಪಡಿಸಿದಾಗ ಆತನು ತನ್ನ ಕಳ್ಳತನದ ಅಪರಾಧವನ್ನು ಒಪ್ಪಿಕೊಂಡದ್ದಲ್ಲದೆ, ಈ ಹಿಂದೆ ಮಾಡಿದ್ದ ಕಳ್ಳತನಗಳನ್ನೂ ಒಪ್ಪಿಕೊಂಡನು. ಆ ಕಳ್ಳನಿಗೆ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸಿದ ನ್ಯಾಯಾಧೀಶರು ಶ್ರೀಮಂತ ವ್ಯಾಪಾರಿಯನ್ನು ಕರೆಸಿ, ಆತನು ಧನ ಸಂಗ್ರಹ ಮಾಡಿದ ವಿಧಾನದ ಬಗ್ಗೆ ಪ್ರಶ್ನಿಸತೊಡಗಿದರು. ಆದರೆ ತನ್ನ ಗುಟ್ಟು ಬಿಡಲೊಪ್ಪದ ಆ ವ್ಯಾಪಾರಿ ‘ಎಲ್ಲವೂ ನನ್ನ ವ್ಯಾಪಾರದ ಫಲವಾಗಿದೆ’ ಎಂದು ವಾದಿಸಿದನು. ಬಡವರ ಶೋಷಣೆಯ ತಪ್ಪನ್ನು ಒಪ್ಪಿಕೊಳ್ಳಲೇ ಇಲ್ಲ.

ನ್ಯಾಯಾಧೀಶರು ವ್ಯಾಪಾರಿಗೆ ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿದರು. ಸಿಟ್ಟುಗೊಂಡ ವ್ಯಾಪಾರಿ ಪ್ರಶ್ನಿಸಿದ- ‘ನೀವು ಕಳ್ಳನಿಗೆ ಒಂದು ವರ್ಷ ಶಿಕ್ಷೆ ವಿಧಿಸಿದರೆ, ನನಗೇಕೆ ಎರಡು ವರ್ಷ ವಿಧಿಸುತ್ತೀರಿ?’. ನ್ಯಾಯಾಧೀಶರು ಸಮಾಧಾನದಿಂದ ಉತ್ತರಿಸಿದರು- ‘ಆ ಕಳ್ಳನು ತಪ್ಪನ್ನು ಒಪ್ಪಿಕೊಂಡನು. ಆದ್ದರಿಂದ ಅವನಲ್ಲಿ ಹೃದಯ ಪರಿವರ್ತನೆ ಸಾಧ್ಯತೆ ಇದೆ. ಆದರೆ ನೀವು ಒಪ್ಪಿಕೊಳ್ಳಲೇ ಇಲ್ಲ. ಆದ್ದರಿಂದ ಈ ಶಿಕ್ಷೆಯಿಂದ ನಿಮಗಾವ ಶಿಕ್ಷ ಣವೂ ಸಿಗಲಾರದು’ ಎಂದಾಗ ವ್ಯಾಪಾರಿ ತಲೆ ತಗ್ಗಿಸಿದ.

ಈ ಪ್ರಪಂಚದಲ್ಲಿ ಮಾನವನು ಶಾಲಾ-ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಪಡೆಯುವ ಶಿಕ್ಷ ಣಕ್ಕಿಂತ ಬದುಕೆಂಬ ವಿದ್ಯಾಲಯದಲ್ಲಿ ಪಡೆಯುವ ಶಿಕ್ಷ ಣವು ಹೆಚ್ಚು ಮೌಲ್ಯಯುತವಾದುದೇ ಆಗಿದೆ. ಕಾನೂನು ಕಟ್ಟಳೆ, ರೀತಿ-ರಿವಾಜು, ನೀತಿ- ನಿಯಮಗಳನ್ನು ಮೀರಿದವರಿಗೆ ಸರಕಾರ ಇಲ್ಲವೇ ಸಮಾಜವು ನೀಡುವ ಶಿಕ್ಷೆಯೆಂದರೆ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟು, ಭವಿಷ್ಯದಲ್ಲೆಂದೂ ಅಂತಹ ತಪ್ಪು ಮಾಡದೆ ಸಭ್ಯ ನಾಗರಿಕರಾಗಿ ಬದುಕೆಂಬ ಪ್ರೇರಣೆ ನೀಡುವ ಹಾಗೆ ಪರಿವರ್ತನೆ ಮಾಡುವ ಉಜ್ವಲ ಶಿಕ್ಷ ಣವೇ ಆಗಿದೆ. ಇಂತಹ ವ್ಯಕ್ತಿತ್ವ ಪರಿವರ್ತನೆಯ ಬಗ್ಗೆ ಅಭಿಮಾನ ಪಡಬೇಕಾಗಿದೆ.

ಕೃಪೆ: ಡಾ.ಡಿ.ವೀರೇಂದ್ರ ಹೆಗ್ಗಡೆ. (ಸಾಮಾಜಿಕ ಜಾಲತಾಣದಲ್ಲಿನ ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ; ರಾಜ್ಯ ಚುನಾವಣೆ ಆಯುಕ್ತ ಭೇಟಿ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ; ರಾಜ್ಯ ಚುನಾವಣೆ ಆಯುಕ್ತ ಭೇಟಿ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election ಬಿರುಸಿನ ಮತದಾನನಡೆಯುತ್ತಿದ್ದು, ರಾಜ್ಯ ಚುನಾವಣೆ ಆಯುಕ್ತ ಜಿ.ಎಸ್. ಸಂಗೇಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[ccc_my_favorite_select_button post_id="117618"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!