ಬೆಂಗಳೂರು, (ಏ.27); ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದ ಪೆನ್ಡ್ರೈವ್ ರಹಸ್ಯ ಈಗ ಗೊತ್ತಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಾಸನ ನಾಯಕರ ವಿರುದ್ಧ ಲೈಂಗಿಕ ಹಗರಣ ಆರೋಪ ಕೇಳಿ ಬಂದ ಬಗ್ಗೆ ಮಾತನಾಡಿದ ಅವರು, ಹೆಚ್ಡಿಕೆ ಪೆನ್ಡ್ರೈವ್ನಲ್ಲಿ ಏನಿದೆ ಈಗ ಗೊತ್ತಾಗಿದೆ.
ಆ ಪೆನ್ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಎಲ್ಲವೂ ಗೊತ್ತಿದೆ ಅವರೇ ಮಾಧ್ಯಮದವರಿಗೆ ತೋರಿಸಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಿದರೆ ಒಳಿತು ಎಂದು ನಗೆ ಬೀರಿದರು.
ಮಾಧ್ಯಮದವರು ಯಾಕ್ ಸುಳ್ ಹೇಳ್ತೀರಿ ಆ ಪೆನ್ಡ್ರೈ ಹಾಸನದ ನಾಯಕನದ್ದಲ್ಲ ಎನ್ಡಿಎ ಅಭ್ಯರ್ಥಿಯದ್ದು, ಸಂಸದನದ್ದು. ಈ ಬಗ್ಗೆ ನರೇಂದ್ರ ಮೋದಿ, ಶೋಭಕ್ಕ ಅಶ್ವತ್ಥನಾರಾಯಣ, ಕುಮಾರಸ್ವಾಮಿ ಉತ್ತರಕೊಡಬೇಕು ನಮ್ಮ ಹೆಸರಿಗೆ ಮಸಿ ಬಳಿಯುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿದ್ದಾರಂತೆ. ಮಹಿಳಾ ಆಯೋಗದ ಅಧ್ಯಕ್ಷರು ಇವೆಲ್ಲವನ್ನೂ ನೋಡಿ ಸಿಎಂ ಗೆ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಮಾಧ್ಯಮದವರು ನೀವ್ಯಾಕೆ ಮೌನವಾಗಿದ್ದೀರಿ ರಾಜ್ಯದ ಜನತೆಗೆ ಬೆಳಕು ತೋರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಮಹಿಳೆಯರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಅವರಿಗೆ ಒಳ್ಳೆಯದಾಗುತ್ತಾ ಎಂದು ಕುಮಾರಸ್ವಾಮಿ ಅವರು ಡಿಕೆಶಿ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ "ಅವರು ನನ್ನ ಹೆಸರು ಹೇಳಿ ಮಾತನಾಡಲಿ.
ಆಮೇಲೆ ನನ್ನ ಪುರಾಣ, ನನ್ನ ಕಥೆ, ನನ್ನ ನುಡಿಮುತ್ತುಗಳನ್ನು ಹೇಳುತ್ತೇನೆ. ಹೆಣ್ಣು ಮಕ್ಕಳ ಮಾನ ಹರಣವಾಗಿರುವುದನ್ನು ಕುಮಾರಸ್ವಾಮಿ ಅವರು ಈ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರಾ?" ಎಂದು ಮರುಪ್ರಶ್ನಿಸಿದರು.
ಇಬ್ಬರು ಸಂತ್ರಸ್ತೆಯರು ಡಿಜಿ ಅವರಿಗೆ ದೂರು ನೀಡಿರುವ ಬಗ್ಗೆ ಕೇಳಿದಾಗ, "ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ತಿಳಿದುಕೊಂಡು ಆಮೇಲೆ ಮಾತನಾಡುತ್ತೇನೆ. ಮಾಹಿತಿ ಇಲ್ಲದೆ ಮಾತನಾಡಬಾರದು" ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
crime
politics
crime
literature
crime
literature
literature
crime
crime
politics
health
crime
crime
politics
politics
politics
literature
politics
politics
education
crime
literature
crime
crime
literature
literature
crime
politics
literature
crime